Wednesday, May 1, 2024
spot_img
HomeMandya‘ಆದಿಚುಂಚನಗಿರಿ ವಿಜ್ಞಾನ ಕೇಂದ್ರ’ ದ ಭೂಮಿ ಪೂಜೆ ನೆರವೇರಿಸಿದ ಸಿ.ಎಂ

‘ಆದಿಚುಂಚನಗಿರಿ ವಿಜ್ಞಾನ ಕೇಂದ್ರ’ ದ ಭೂಮಿ ಪೂಜೆ ನೆರವೇರಿಸಿದ ಸಿ.ಎಂ

ಮಂಡ್ಯ: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ “ಆದಿಚುಂಚನಗಿರಿ ವಿಜ್ಞಾನ ಕೇಂದ್ರ’ ಭೂಮಿ ಪೂಜೆ ಸಮಾರಂಭವು ಇಂದು ಜರುಗಿತು.

ಶ್ರೀ. ಆದಿಚುಂಚನಗಿರಿ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಯುವಜನೋತ್ಸವ ಕರ‍್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ವಿಜ್ಞಾನ ಕೇಂದ್ರದ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್,  ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಸುರೇಶಗೌಡ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments