ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ಜಿಲ್ಲಾವಾರು ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ವೀಕ್ಷಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕ ಮಾಡಿರುತ್ತಾರೆ.
ಕಾಂಗ್ರೆಸ್ ಜಿಲ್ಲಾ ಸದಸ್ಯತ್ವ ಅಭಿಯಾನಕ್ಕೆ ವೀಕ್ಷಕರಾಗಿ ಆಯ್ಕೆಯಾದ ಎ.ಸಿ.ಶ್ರೀನಿವಾಸ್ ಅವರನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
ಕೆಪಿಸಿಸಿ ಜಿಲ್ಲಾವಾರು ಸದಸ್ಯತ್ವ ನೊಂದಣಿ ಅಭಿಯಾನದ ನೂತನ ವೀಕ್ಷಕರಾಗಿ ಆಯ್ಕೆಯಾದ ಎ.ಸಿ.ಶ್ರೀನಿವಾಸ್ ಮಾತನಾಡಿ, ಪ್ರತಿ ಬೂತ್ನಲ್ಲಿ ಕನಿಷ್ಠ 250 ಸದಸ್ಯತ್ವ ನೊಂದಣಿ ಮಾಡಲಾಗುತ್ತದೆ. ಎಲ್ಲಾ ಮುಖಂಡರ ಮತ್ತು ಕಾರ್ಯಕರ್ತರ ಸಹಕಾರ ಇರಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವುದರ ಮೂಲಕ ಕಾಂಗ್ರೆಸ್ ಪಕ್ಷದ ಶಾಸಕರುಗಳನ್ನು ಆಯಾ ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಳ್ಳುವ ಕೆಲಸ ಮಾಡಲಾಗುತ್ತದೆ.