ಚಿಕ್ಕಬಳ್ಳಾಪುರ: ತಾಲ್ಲೂಕಿನ ಮೊಟ್ಲೂರು ಗ್ರಾಮದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಸೇನೆ ಜಿಲ್ಲಾ ಘಟಕ ಮತ್ತು ಜಿಲ್ಲಾ ಯುವಘಟಕದ ಸಂದೀಪ್ ಕುಮಾರ್ ರವರ ನೇತೃತ್ವದಲ್ಲಿ ಶಾಲಾವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಮಾಸ್ಕ್ ಹಾಗೂ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿ.ರವಿಕಮಾರ್, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಚಂದ್ರು, ಜಿಲ್ಲಾ ಉಪಾಧ್ಯಕ್ಷ ಉದಯಶಂಕರ್, ಜಿಲ್ಲಾ ಕಾರ್ಯದರ್ಶಿ ಸಾಗರ್, ಶಾಲಾ ಮುಖ್ಯ ಶಿಕ್ಷಕ ಜಗದೀಶ್, ಮುಖಂಡರಾದ ಅಂಬರೀಶ್, ಮತ್ತಿತರರು ಹಾಜರಿದ್ದರು.