ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಕಸಾಪ ತಾಲ್ಲೂಕು ಅಧ್ಯಕ್ಷರಾಗಿ ಅನಂತಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕೋಡಿರಂಗಪ್ಪ ಅವರ ನಿವಾಸದ ವಿವೇಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ತಾಲ್ಲೂಕು ಕಸಾಪ ನೂತನ ಅಧ್ಯಕ್ಷರ ಹೆಸರನ್ನು ಘೋಷಿಸಲಾಯಿತು.
ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಸೊಣ್ಣೇಗೌಡ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ವೈ.ಎಲ್.ಹನುಂತರಾವ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಅಮೃತ್ ಕುಮಾರ್, ಕಸಾಪದ ತ್ಯಾಗರಾಜ್,ಸರ್ದಾರ್ ಚಾಂದ್ ಪಾಷಾ, ಸಿ.ಎಂ.ಮಲ್ಲಿಕಾರ್ಜುನ್, ತತ್ತೂರು ಲೋಕೇಶಪ್ಪ, ಡಾ.ಶಂಕರ್, ಸು.ದಾ.ವೆಂಕಟೇಶ್, ಸತೀಶ್, ಮಂಚನಬಲೆ ಶ್ರೀನಿವಾಸ್, ರೆಡ್ಡಪ್ಪ, ನರಸಿಂಹರೆಡ್ಡಿ, ಲಕ್ಷ್ಮಿನರಸಿಂಹ, ಟಿ.ವಿ.ಚಂದ್ರಶೇಖರ್, ಪಟೇಲ್ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.