ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರಕ್ಕೆ ಆಕಾಂಕ್ಷಿಯಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಮುಖ್ಯ ಗುರಿ ಎಂದು ಕಾಂಗ್ರೆಸ್ ಮುಖಂಡ ಹೆಚ್ ಎ ಎಲ್ ದೇವರಾಜ್ ಹೇಳಿದರು.
ತಾಲೂಕಿನ ಸಾದಲಿ ಗ್ರಾಮದ ಕಾಂಗ್ರೆಸ್ ಮುಖಂಡ ಗೋವಿಂದರಾ ಜು ಮನೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ತಾನು ಅಭ್ಯರ್ಥಿ ಎಂದು ಕೆಲವರು ಪ್ರತಿಬಿಂಬಿಸುವುದು ನನ್ನ ಗಮನಕ್ಕೆ ಬಂದಿದೆ ಆದರೆ ನಾನು ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮುನಿಯಪ್ಪ ಅವರನ್ನು ಮತ್ತೊಮ್ಮೆ ಕ್ಷೇತ್ರದ ಶಾಸಕರನ್ನಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಪ್ರಕಟಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇನೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಹೋಬಳಿವಾರು ಕಬ್ಬಡಿ ಸಹಿತ ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಕರ್ಷಕ ಬಹುಮಾನಗಳನ್ನು ಸಹ ನೀಡುವ ಜೊತೆಗೆ ಪಕ್ಷದ ತತ್ವ ಸಿದ್ಧಾಂತಗಳ ಕುರಿತು ಮನವರಿಕೆ ಮಾಡಿ ಕಾಂಗ್ರೆಸ್ ಪಕ್ಷದತ್ತ ಯುವಕರನ್ನು ಸೆಳೆಯುವ ಕೆಲಸವನ್ನು ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸುವ ದೃಷ್ಟಿಕೋನದಿಂದ ಸೇವಾಕಾರ್ಯಗಳನ್ನು ಮಾಡುತ್ತಿದ್ದೇನೆ ಇದರಲ್ಲಿ ಯಾವುದೇ ರೀತಿಯ ರಾಜಕೀಯ ಉದ್ದೇಶವನ್ನು ಹೊಂದಿಲ್ಲ ಶಾಸಕ ವಿ ಮುನಿಯಪ್ಪ ಅವರ ನೇತೃತ್ವದಲ್ಲಿ ಕ್ಷೇತ್ರಾದ್ಯಂತ ಪಕ್ಷದ ಸದಸ್ಯರ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸುತ್ತಿದ್ದು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಹಿತವನ್ನು ಕಾಪಾಡಲು ಹಗಲಿರುಳು ಶ್ರಮಿಸುವುದಾಗಿ ಘೋಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ವಿ, ಮುನಿಯಪ್ಪ, ಸಾದಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗೋವಿಂದರಾಜು, ಸಾದಲಿ sfcs ಬ್ಯಾಂಕ್ ಅಧ್ಯಕ್ಷ ಅಶ್ವಥ್ ರೆಡ್ಡಿ ಇತರರು ಹಾಜರಿದ್ದರು,