Wednesday, April 24, 2024
spot_img
HomeChikballapurಕಾಂತಿ ಸೇವಾ ಟ್ರಸ್ಟ್ ವತಿಯಿಂದ ಬಡ ಮಕ್ಕಳಿಗೆ ಬಟ್ಟೆ ಮತ್ತು ತಿಂಡಿ ತಿನಿಸು ವಿತರಣೆ

ಕಾಂತಿ ಸೇವಾ ಟ್ರಸ್ಟ್ ವತಿಯಿಂದ ಬಡ ಮಕ್ಕಳಿಗೆ ಬಟ್ಟೆ ಮತ್ತು ತಿಂಡಿ ತಿನಿಸು ವಿತರಣೆ

ಚಿಕ್ಕಬಳ್ಳಾಪುರ: ನಗರದ ಕಂದವಾರ ಗ್ರಾಮದಲ್ಲಿ ಬಡ ಮಕ್ಕಳಿಗೆ ಬಟ್ಟೆ ಮತ್ತು ತಿಂಡಿ ತಿನಿಸುಗಳನ್ನು ಕಾಂತಿ ಸೇವಾ ಟ್ರಸ್ಟ್ ವತಿಯಿಂದ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಚಾರಿ ಠಾಣೆ ಸಬ್ ಇನ್ಸ್ಪೆಕ್ಟರ್ ವೇಣುಗೊಪಾಲ್ ರವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವರಿಂದ ಬಡ ಮಕ್ಕಳಿಗೆ ಉಚಿತವಾಗಿ ಬಟ್ಟೆ ವಿತರಿಸಲಾಯಿತು.
ಕಾಂತಿ ಸೇವಾ ಟ್ರಸ್ಟ್ ನವರು ಇನ್ನೂ ಹೆಚ್ಚಿನ ಸಮಾಜ ಸೇವೆಯನ್ನು ಹಮ್ಮಿಕೊಂಡು ಬಡ ಜನರಿಗೆ, ವಿದ್ಯಾರ್ಥಿಗಳಿಗೆ ಹಾಗೂ ನಿರ್ಗತಿಕರಿಗೆ ತಮ್ಮ ಟ್ರಸ್ಟ್ ವತಿಯಿಂದ ಹೆಚ್ಚಿನ ಸಹಾಯ ಮಾಡಬೇಕು ಎಂದು ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ವೇಣುಗೊಪಾಲ್ ರವರು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಟ್ರಸ್ಟ್ನ ಅಧ್ಯಕ್ಷರಾದ ಕಾಂತರಾಜು.ಸಿ. ಕಾರ್ಯದರ್ಶಿ ಉಮೇಶ್ ಜಿ. ಖಜಾಂಚಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments