ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಚನಬಲೆ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ನರೇಗಾ & ಗ್ರಾಮ ಪಂಚಾಯಿತಿ ಯೋಜನೆ ಅಡಿಯಲ್ಲಿ ಬೀರೇಶ್ವರ ದೇವಸ್ಥಾನದ ಗುಡಿಯಿಂದ ಬಾಬಯ್ಯನ ಗುಡಿಯವರೆಗೂ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ಚಾಲನೆ ಕೊಡಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಧು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ರಾದ ಡಾ!! ಎಂ.ವಿ.ಸದಾಶಿವ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವೆಂಕಟೇಶ್, ಎನ್.ವೆಂಕಟರಾಜು, ಸುಶೀಲಮ್ಮ, ರಮೇಶ್, ಮಹೇಶ್, ಶ್ರೀಕಾಂತ್ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಮಂಜುನಾಥ್, ಮಣಿಕುಮಾರ್ ಶ್ರೀಧರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.