ಚಿಕ್ಕಬಳ್ಳಾಪುರ: ನಗರದ ಭಜನೆ ಮನೆ ರಸ್ತೆಯಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ಭಜನೆ ಮಂದಿರದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತಾದಿಗಳು ಅತ್ಯದಿಕ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ದೇವಾಲಯ ಸಂಸ್ಥೆಯ ಅಧ್ಯಕ್ಷರಾದ ಆನಂದರಾಜು, ಮಹಾಕಾಳಿ ಬಾಬು ಮತ್ತಿತರರು ಹಾಗೂ ಭಕ್ತಾದಿಗಳು ಇದ್ದರು.