Friday, April 26, 2024
spot_img
HomeBangalore2023ಕ್ಕೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಶ್ರಮಿಸಲು ಡಿಕೆಶಿ ಸಲಹೆ ಜಿಲ್ಲಾ ಕಾಂಗ್ರೆಸ್ ವಿದ್ಯಾರ್ಥಿ ಘಟಕಕ್ಕೆ...

2023ಕ್ಕೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಶ್ರಮಿಸಲು ಡಿಕೆಶಿ ಸಲಹೆ ಜಿಲ್ಲಾ ಕಾಂಗ್ರೆಸ್ ವಿದ್ಯಾರ್ಥಿ ಘಟಕಕ್ಕೆ ಎಂ.ಮುಖೇಶ್‌ಬಾಬು ಆಯ್ಕೆ

ದೇವನಹಳ್ಳಿ: ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ವಿದ್ಯಾರ್ಥಿ ಘಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರನ್ನಾಗಿ ನಾಗನಾಯಕನಹಳ್ಳಿ ಎಂ.ಮುಖೇಶ್ ಆಯ್ಕೆಯಾಗಿರುತ್ತಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ನೀಡಿ ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ತತ್ವ ಸಿದ್ಧಾಂತಗಳಡಿಯಲ್ಲಿ ಕೆಲಸ ಮಾಡಬೇಕು. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ವಹಿಸಿರುವ ಜವಾಬ್ದಾರಿಗಳನ್ನು ಚಾಚೂ ತಪ್ಪದೆ ಮಾಡುವ ಕೆಲಸ ಮಾಡಬೇಕು. ಪ್ರತಿ ಗ್ರಾಮದಲ್ಲಿನ ಪ್ರತಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಸ್ಪಂಧಿಸುವ ಕೆಲಸ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮಾಡುವಂತಾಗಬೇಕು. ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದರು.

ಜಿಲ್ಲಾ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಂ.ಮುಖೇಶ್‌ಬಾಬು ಮಾತನಾಡಿ, ಪಕ್ಷದ ಹಿರಿಯ ನಾಯಕರು, ಮುಖಂಡರ ಸಹಕಾರ ಪಡೆದುಕೊಂಡು ಪಕ್ಷ ಸಂಘಟಿಸಲಾಗುತ್ತದೆ. ಕೇಂದ್ರದಲ್ಲಿ ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ಜನರಿಗೆ ಮತ್ತು ಯುವಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ. ನಿರುದ್ಯೋಗ ಸಮಸ್ಯೆ ಎಲ್ಲಾ ಗ್ರಾಮ ಮತ್ತು ನಗರ ವಾಸಿಗಳಿಗೆ ಕಾಡುತ್ತಿದೆ. ಜನರು ಎಚ್ಚೆತ್ತುಕೊಳ್ಳಲು ಪಕ್ಷದ ಮುಖಂಡರೊAದಿಗೆ ಬೆರೆತು ಕಾಂಗ್ರೆಸ್ ಪಕ್ಷವನ್ನು ಕೇಂದ್ರ ಮತ್ತು ರಾಜ್ಯದಲ್ಲಿ ತರಲು ಶ್ರಮವಹಿಸಲಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಕಯ್ಯಮ್ಮ, ಹಿರಿಯ ಹೋರಾಟಗಾರ ಸಿ.ಮುನಿಯಪ್ಪ ಮತ್ತಿತರರು ಅಭಿನಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments