Thursday, March 28, 2024
spot_img
HomeChamarajanagarಬಿಳಿಗಿರಿರಂಗನಾಥಸ್ವಾಮಿ ದೇವಾಲಯ, ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ದೇವಾಲಯ, ಧಾರ್ಮಿಕ ಕೇಂದ್ರ, ಪ್ರವಾಸೋದ್ಯಮ ಸ್ಥಳಗಳ...

ಬಿಳಿಗಿರಿರಂಗನಾಥಸ್ವಾಮಿ ದೇವಾಲಯ, ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ದೇವಾಲಯ, ಧಾರ್ಮಿಕ ಕೇಂದ್ರ, ಪ್ರವಾಸೋದ್ಯಮ ಸ್ಥಳಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ : ಜಿಲ್ಲಾಧಿಕಾರಿಯವರಿಂದ ಆದೇಶ

ಚಾಮರಾಜನಗರ: ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪರಿಸರ (ಸಂರಕ್ಷಣೆ) ಕಾಯ್ದೆ 1986ರ ಸೆಕ್ಷನ್ 18 ಮತ್ತು 19ರನ್ವಯ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹಾಗೂ ಹನೂರು ತಾಲೂಕಿನ ಶ್ರೀ ಮಲೈಮಹದೇಶ್ವರ ಬೆಟ್ಟದಲ್ಲಿ ಹಲವು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆಯಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಪ್ರತ್ಯೇಕವಾಗಿ ಆದೇಶಿಸಿದ್ದಾರೆ.

ಜಿಲ್ಲೆಯ ಶ್ರೀ ರಂಗನಾಥಸ್ವಾಮಿ ಮತ್ತು ಸಮೂಹ ದೇವಾಲಯಗಳು, ಶ್ರೀ ಹಿಮವದ್ ಗೋಪಾಲಸ್ವಾಮಿ ದೇವಾಲಯ, ಶ್ರೀ ಚಾಮರಾಜೇಶ್ವರ ದೇವಾಲಯ ಹಾಗೂ ಇತರೆ ಮುಜಾರಾಯಿ ದೇವಾಸ್ಥಾನಗಳು, ಧಾರ್ಮಿಕ ಕೇಂದ್ರಗಳು ಮತ್ತು ಪ್ರವಾಸ್ಯೋದ್ಯಮ ಸ್ಥಳಗಳಾದ ಹೊಗೆನಕಲ್, ಭರಚುಕ್ಕಿ ಜಲಪಾತಗಳು, ಕೆ. ಗುಡಿ ಅರಣ್ಯ ಪ್ರದೇಶಗಳು ಹಾಗೂ ಜಿಲ್ಲೆಯ ಇತರೆ ಎಲ್ಲಾ ಪ್ರವಾಸ್ಯೋದ್ಯಮ ಸ್ಥಳಗಳಲ್ಲಿಯೂ ಸಹ ಹಲವು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

ದೇವಾಲಯದ ಆವರಣ ಹಾಗೂ ಹೊರಗಡೆ, ಧಾರ್ಮಿಕ ಕೇಂದ್ರ, ಪ್ರವಾಸೋದ್ಯಮ ಸ್ಥಳಗಳ ಆವರಣದಲ್ಲಿ ಮತ್ತು ಹೊರಗಡೆ ನಿಷೇಧಿತ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಕ್ಯಾರಿಬ್ಯಾಗ್, ತಟ್ಟೆ, ಲೋಟ, ಬಟ್ಟಲು, ಬ್ಯಾನರ್, ಬಂಟಿAಗ್ಸ್ ಮುಂತಾದ ನಿಷೇಧಿತ ಪ್ಲಾಸ್ಟಿಕ್ ವಸ್ತಗಳನ್ನು ಯಾವುದೇ ರೀತಿಯಲ್ಲಿ ಬಳಕೆ ಮಾಡಬಾರದು. ದೇವಾಲಯ, ಧಾರ್ಮಿಕ, ಪ್ರವಾಸೋದ್ಯಮ ಸ್ಥಳಗಳ ಪ್ರಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ ಎಂಬ ಫಲಕವನ್ನು ಅಳವಡಿಸುವ ಮೂಲಕ, ಮಂದಿರ ದೇವಾಸ್ಥಾನ, ಪ್ರವಾಸೋದ್ಯಮ ಸ್ಥಳಗಳಿಗೆ ಬರುವ ಸಾರ್ವಜನಿಕರು ಹಾಗೂ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು.

ದೇವಸ್ಥಾನದಲ್ಲಿ ಪ್ರತಿದಿನ ಪ್ರಸಾದವನ್ನು ವಿತರಿಸಲು ಹಾಗೂ ಊಟ ತಿಂಡಿಗಾಗಿ ಯಾವುದೇ ರೀತಿಯ, ಪ್ಲಾಸ್ಟಿಕ್ ತಟ್ಟೆ, ಕಪ್ ಅಥವಾ ಬಟ್ಟಲನ್ನು ಉಪಯೋಗಿಸಬಾರದು. ಪ್ರವಾಸೋದ್ಯಮ ಸ್ಥಳಗಳಲ್ಲಿಯೂ ಸಹ ಊಟ ತಿಂಡಿಗಾಗಿ ಯಾವುದೇ ರೀತಿಯ, ಪ್ಲಾಸ್ಟಿಕ್ ತಟ್ಟೆ, ಕಪ್ ಅಥವಾ ಬಟ್ಟಲನ್ನು ಬಳಕೆ ಮಾಡುವಂತಿಲ್ಲ.

ಪೂಜಾ ಸಾಮಾಗ್ರಿಗಳನ್ನು ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳಲ್ಲಿ ತರದಂತೆ ಭಕ್ತರಿಗೆ ಸೂಚನೆ ನೀಡಬೇಕು. ದೇವರ ಪೂಜೆ ಮತ್ತು ಅಭಿಷೇಕಕ್ಕೆ ಪ್ರಸಾದ, ದೀಪದ ಎಣ್ಣೆ, ಹಾಲು, ತುಪ್ಪ ಊದುಬತ್ತಿ, ಅರಿಶಿಣ, ಕುಂಕುಮ, ಕರ್ಪೂರ, ಹೂವು ಇನ್ನಿತರ ಅಗತ್ಯ ಪೂಜಾ ಸಾಮಾಗ್ರಿಗಳನ್ನು ತರಲು ಯಾವುದೇ ಪ್ಲಾಸ್ಟಿಕ್ ಕವರ್ ಬಳಸದೇ ಭಕ್ತರು ತಮ್ಮದೇ ಬಟ್ಟೆ, ಕಾಗದದ ಕೈಚೀಲಗಳಲ್ಲಿ, ಸ್ಟೀಲ್ ಅಥವಾ ಇನ್ನಿತರ ಲೋಹ, ಮಣ್ಣಿನ ಪಾತ್ರೆಗಳಲ್ಲಿ ತರುವಂತೆ ಕಡ್ಡಾಯ ಸೂಚನೆ ನೀಡಬೇಕು. ಹಬ್ಬ ಹರಿದಿನಗಳಲ್ಲಿ ಅಥವಾ ವಿಶೇಷ ಸಂದರ್ಭಗಳಲ್ಲಿ ಜಾಹಿರಾತು ನೀಡಲು ಯಾವುದೇ ಪ್ಲಾಸ್ಟಿಕ್‌ನಿಂದ ತಯಾರಿಸಿದ ಬ್ಯಾನರ್ ಮತ್ತು ಬಂಟಿAಗ್ಸ್ ಬಳಸದಂತೆ ಕ್ರಮವಹಿಸಬೇಕು. ಯಾವುದೇ ರೀತಿಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಅಲಂಕಾರಿಕ ಹೂವು, ತೋರಣ ಮುಂತಾದವುಗಳನ್ನು ದೇವಾಸ್ಥಾನದಲ್ಲಿ ಬಳಸದಂತೆ ಜಾಗ್ರತೆ ವಹಿಸಬೇಕು.

ಹೊಗೆನಕಲ್ ಜಲಪಾತದ ಪ್ರದೇಶದಲ್ಲಿಯೂ ಮತ್ತು ದೇವಾಲಂiÀi ಪ್ರವಾಸೋದ್ಯಮ ಸ್ಥಳಗಳಲ್ಲಿಯೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂಬ ಫಲಕ ಅಳವಡಿಸಿ ಸಾರ್ವಜನಿಕರು ಹಾಗೂ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments