ಮಿಟ್ಟಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ಭೇಟಿ

0
84

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚಿಲಕಲನೇರ್ಪು ಹೋಬಳಿ ವ್ಯಾಪ್ತಿಯ ಮಿಟ್ಟಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಮುಂಜಾನೆ  ಜೋರಾದ ಶಬ್ದ ಕೇಳಿ ಬಂದು ಈ ಭಾಗದ  ಜನರು ಆತಂಕದಲ್ಲಿದ್ದ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳ ತನಿಖೆ ಮಾಡಿ,  ಗ್ರಾಮಸ್ಥರಲ್ಲಿ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ,  ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವರದಿ ಪಡೆಯಲಾಗಿದ್ದು,  ಸದರಿ ಪ್ರದೇಶದಲ್ಲಿ ಯಾವುದೇ ಭೂಕಂಪದ ವಾತಾವರಣ ಇರುವುದಿಲ್ಲವೆಂದು ವರದಿ ಬಂದಿದೆ. ಈ ಬಗ್ಗೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದರು.

            ಈ  ಸಂದರ್ಭದಲ್ಲಿ  ಚಿಂತಾಮಣಿ  ತಹಸೀಲ್ದಾರ್  ಹನುಮಂತರಾಯಪ್ಪ  ಹಾಗೂ  ವಿವಿಧ  ಇಲಾಖೆಗಳ  ಅಧಿಕಾರಿಗಳು, ಸಿಬ್ಬಂದಿ  ಹಾಜರಿದ್ದರು.

LEAVE A REPLY

Please enter your comment!
Please enter your name here