Saturday, April 20, 2024
spot_img
HomeChikballapurಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯ ಖಂಡಿಸಿ ಬಲಮುರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯ ಖಂಡಿಸಿ ಬಲಮುರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಡಿ.ಕೆ.ಸುರೇಶ್ ಮತ್ತು ಎಂ.ಎಲ್.ಸಿ.ರವಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯ ಖಂಡಿಸಿ ಪ್ರತಿಭಟನೆ ನಡೆಸಿದರು.

ನಿನ್ನೆ ರಾಮನಗರದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ ಗೂಂಡಾ ವರ್ತನೆಯನ್ನು ತೋರಿಸಿದ ಸಂಸದ ಡಿಕೆ ಸುರೇಶ ಮತ್ತು ಮೈಕ ಕಿತ್ತೆಸೆದು ದುರ್ವರ್ತನೆ ತೋರಿದ ಕಾಂಗ್ರೆಸ್ ಎಂ.ಎಲ್.ಸಿ ರವಿ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ ಗೂಂಡಾ ಸಂಸ್ಕೃತಿಯ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಚಿಕ್ಕಬಳ್ಳಾಪುರ ನಗರದ ಬಲಮುರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ  ಮಾತನಾಡಿ ನಿನ್ನೆ ರಾಮನಗರದಲ್ಲಿ ನಡೆದಂತಹ ಘಟನೆ ಇಡೀ ರಾಜ್ಯದ ಜನತೆ ಖಂಡಿಸುತ್ತದೆ ಸಂಸದ ಡಿಕೆ ಸುರೇಶ್ ರವರು ಒಬ್ಬ ಜನಪ್ರತಿನಿಧಿಯಾಗಿ ರಾಮನಗರದ ವಿವಿಧ ಯೋಜನೆಗಳು, ಕೆಂಪೇಗೌಡರ ಪ್ರತಿಮೆ ಮತ್ತು ಸಂವಿಧಾನ ಶಿಲ್ಪಿ  ಡಾಟಟಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿಗಳ ಮುಂದೆ ಈ ರೀತಿ ಗೂಂಡಾ ವರ್ತನೆ ಮಾಡಿರುವುದು ಎಷ್ಟು ಮಾತ್ರ ಸರಿ ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಾರ್ಟಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಸಂಸದ ಡಿಕೆ ಸುರೇಶ್ ಅವರ ಕ್ಷೇತ್ರದ ಜನತೆಗೆ ಅಭಿವೃದ್ಧಿಪರ ಕೆಲಸ ಮಾಡಿ ರಾಜ್ಯಕ್ಕೆ ಮಾದರಿಯಾಗ ಬೇಕು ಹೊರತು ರೌಡಿಸಂ ಗೂಂಡಾ ವರ್ತನೆ ಅಲ್ಲಿ ಮಾದರಿಯಾಗಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ *ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ ನವರು*, ವಿಭಾಗದ ಸಂಘಟನಾ ಕಾರ್ಯದರ್ಶಿ ಕಾಂತರಾಜ್ ಅವರು, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್ ರವರು, ರಾಜ್ಯ ಉಪಾಧ್ಯಕ್ಷರಾದ ಲೋಕೇಶ್ ಗೌಡರವರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಗೌಡಗೆರೆ ರಾಜಶೇಖರ್ ರವರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ್ ಗೌಡ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್, ಹಾಗೂ  ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments