ಪಾಲಾರ್ ಪತ್ರಿಕೆ | Palar Patrike
ಚಿಕ್ಕಬಳ್ಳಾಪುರ: ಭಾರತೀಯ ಜನತಾ ಪಾರ್ಟಿ ಗ್ರಾಮಂತರ ಮಂಡಲ ಕಾರ್ಯಕಾರಿಣಿ ಸಭೆ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಶ್ರೀ ವಿದ್ಯಾಗಣಪತಿ ದೇವಾಲಯದ ಆವರಣದಲ್ಲಿ ನಡೆಯಿತು. ಈ ಸಭೆ ಅಧ್ಯಕ್ಷತೆಯನ್ನು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಕೆ.ಎಸ್.ಕೃಷ್ಣಾರೆಡ್ಡಿ ವಹಿಸಿದ್ದರು ಹಾಗೂ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಂಡಳಿ ಅಧ್ಯಕ್ಷರಾದ ಕೆ.ವಿ.ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮರಳುಕುಂಟೆ ಕೃಷ್ಣಮೂರ್ತಿ ಮುರುಳಿಧರ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಪ್ರಭಾರಿಗಳಾದ ಡಾ. ಪದ್ಮಪ್ರಕಾಶ್, ಸಹ-ಪ್ರಭಾರಿಗಳಾದ ವಿಜಯಲಕ್ಷ್ಮಿ, ಗ್ರಾಮಾಂತರ ಮಂಡಲದ ಮಂಡಲದ ಪ್ರಧಾನ ಕಾರ್ಯದರ್ಶಿ ಸೊಪ್ಪಹಳ್ಳಿ ಎನ್.ರಾಮಕೃಷ್ಣ, ರಾಕೇಶ್ ಮೋಹನ್, ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಸದಸ್ಯರು, ಮಂಡಲದ ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ-ಸಂಚಾಲಕರು ಭಾಗವಹಿಸಿದ್ದರು.
ಈ ಕಾರ್ಯಕಾರಿ ಸಭೆಯ ನಿರೂಪಣೆ ಹಾಗೂ ವಂದನಾರ್ಪಣೆ ಮಂಡಲದ ಪ್ರಧಾನ ಕಾರ್ಯದರ್ಶಿ ಸೊಪ್ಪಹಳ್ಳಿ ಎನ್.ರಾಮಕೃಷ್ಣ ರವರು ನಡೆಸಿಕೊಟ್ಟರು ಹಾಗೂ ಸ್ವಾಗತ ಭಾಷಣವನ್ನು ಮಂಡಲದ ಪ್ರಧಾನ ಕಾರ್ಯದರ್ಶಿ ರಾಕೇಶ್ ಮೋಹನೂರ್ ನಿರ್ವಹಿಸಿದರು.