ಪಾಲಾರ್ ಪಾತ್ರಿಕೆ | Palar Pathrike
ಚಿಕ್ಕಬಳ್ಳಾಪುರ:ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆಯು ನಗರದ ಎಂ.ಜಿ. ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲ್ಲಿದೆ. ಮತ ಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು, ಭದ್ರತಾ ಕೊಠಡಿಗೆ ಮೂರು ಸುತ್ತಿನ ಭದ್ರತೆ ಒದಗಿಸಲಾಗಿರುತ್ತದೆ. ಮಿಲಿಟರಿ ಪಡೆ, ಸಶಸ್ತ್ರ ಮೀಸಲು ಪಡೆ ಹಾಗೂ ಸ್ಧಳೀಯ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಸಾಮಾನ್ಯ ವೀಕ್ಷಕರು, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ ಮುಂತಾದವರು ಇದ್ದರು.