ಪಾಲಾರ್ ಪತ್ರಿಕೆ | Palar Patrike
ಚಿಂತಾಮಣಿ : ಹನುಮ ಜಯಂತಿ ಪ್ರಯುಕ್ತ ಪುರಾತನ ಪ್ರಸಿದ್ದ ಆಲಂಬಗಿರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಗರ್ಭಗುಡಿಯಲ್ಲಿರುವ ಆಂಜನೇಯಸ್ವಾಮಿಗೆ ವಿಶೇಷವಾಗಿ ವಿಳೆದೆಲೆ ಹಾಗೂ ವಿವಿಧ ಬಗೆಯ ಹೂಗಳಿಂದ ಅಲಂಕಾರವನ್ನು ಮಾಡಲಾಗಿತ್ತು. ಪ್ರತಿ ವರ್ಷವೂ ಒಂದಿಲ್ಲೊAದು ವಿಶೇಷ ಅಲಂಕಾರವನ್ನು ಮಾಡಿಕೊಂಡು ಬರುವುದು ರೂಢಿಯಲ್ಲಿದೆ. ಹನುಮ ಜಯಂತಿಯ ಅಂಗವಾಗಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಅಷ್ಟೋತ್ತರ ಸಹಿತ ಅಷ್ಟಾವಧಾನಸೇವೆಯನ್ನು ಸಲ್ಲಿಸಿ ಮಹಾಮಂಗಳಾರತಿಯನ್ನು ಬೆಳಗಲಾಯಿತು.
ಬೆಳಗಿನಿಂದಲೇ ಸುತ್ತಮುತ್ತಲಿನ ಗ್ರಾಮಸ್ಥರು ಈ ಹನುಮಜಯಂತಿ ಪ್ರಯುಕ್ತ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಮಾಡಿಸುತ್ತಿದ್ದರು. ದರ್ಶನಕ್ಕೆ ಬಂದ ಭಕ್ತರಿಗೆ ಶ್ರೀ ಯೋಗಿನಾರೇಯಣ ಮಠದ ವತಿಯಿಂದ ಪ್ರಸಾದ ವಿನಿಯೋಗದ ವ್ಯವಸ್ಥೆಯನ್ನು ಮಾಡಲಾಗಿತ್ತು. ಹನುಮ ಜಯಂತಿ ಪ್ರಯುಕ್ತ ಗ್ರಾಮಸ್ಥರಿಂದ ಸಂಕೀರ್ತನೆಯನ್ನು ಏರ್ಪಡಿಸಲಾಗಿತ್ತು.