ಪಾಲಾರ್ ಪತ್ರಿಕೆ | Palar Pathrike
ದೇವನಹಳ್ಳಿ:ಪಟ್ಟಣದ ಖಾದಿಬೋರ್ಡ್ ಸಭಾಂಗಣದಲ್ಲಿ ದೇವನಹಳ್ಳಿ ಬ್ಲಾಕ್ ಮಹಿಳಾ ಘಟಕದ ಪದಾಧಿಕಾರಿಗಳ ಸಭೆ ನಡೆಯಿತು.
ಚುನಾವಣೆ ಸಮೀಪಿಸುತ್ತಿರುವ ಕಾರಣ ರಾಜಕೀಯ ಗರಿಗೆದರಿದ್ದು ಆಯಾ ಪಕ್ಷದ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿರುವ ಹಿನ್ನಲೆ ಇಂದು ದೇವನಹಳ್ಳಿ ಪಟ್ಟಣದ ಖಾದಿಬೋರ್ಡ್ ಸಭಾಂಗಣದಲ್ಲಿ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಹಾಗೂ ಸಭೆ ನಡೆಸಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ ಮಾತನಾಡಿ, ಮುಂಬರುವ 2023 ರ ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು ಯಾವುದೇ ಮನಸ್ತಾಪ ಇಟ್ಟುಕೊಳ್ಳದೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ಮಾಜಿ ಸಚಿವ ಕೃಷ್ಣಭೈರೇಗೌಡ ರವರ ಮಾರ್ಗದರ್ಶನದಲ್ಲಿ ರಾಧಾರವರನ್ನು ನೂತನವಾಗಿ ದೇವನಹಳ್ಳಿ ಬ್ಲಾಕ್ ಅಧ್ಯಕ್ಷರನ್ನಾಗಿ ಮಾಡಿ ಆದೇಶ ಪತ್ರ ನೀಡಿರುತ್ತಾರೆ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಿ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ರಾಧರೆಡ್ಡಿರವರು ಮಾತನಾಡಿ, ಪಕ್ಷದಲ್ಲಿ ಸಕ್ರಿಯವಾಗಿ ಪಕ್ಷವಸಂಘಟನೆ ಮಾಡಿದ್ದನ್ನು ಗುರುತಿಸಿ ಈ ದೊಡ್ಡ ಜವಾಬ್ದಾರಿ ವಹಿಸಿದ್ದಾರೆ ಅದನ್ನು ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಂಡು ಮುಂಬರುವ ಎಲ್ಲಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಗಳಾಗಲಿ ಗುಂಪುಗಾರಿಕೆ ಇಲ್ಲದೇ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಎಚ್.ಎಸ್.ರೇವತಿ, ದೇವನಹಳ್ಳಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಾಧವಿ, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಅಕ್ಕಯಮ್ಮ ಮುನಿಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಮಹಿಳಾ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಸುಮಿತ್ರಪ್ರಶಾಂತ್, ವಿಜಯಪುರ ಮಹಿಳಾ ಬ್ಲಾಕ್ ಅಧ್ಯಕ್ಷರು ಆರ್.ಮಂಜುಳಾ ವೆಂಕಟೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೈತ್ರ ವೀರೇಗೌಡ ಸೇರಿದಂತೆ ಪದಾಧಿಕಾರಿಗಳಾದ ರೇಖಾ ವೇಣುಗೋಪಾಲ, ಭಾರತಿ, ಮಾಧವಿ ಕಾಂತರಾಜು, ಚೈತ್ರವೀರೇಗೌಡ, ಸುಮಿತ್ರ, ವಿನೋದ ಮತ್ತಿತರರು ಇದ್ದರು.