ಪಾಲಾರ್ ಪತ್ರಿಕೆ | Palar Patrike
ಮಂಡ್ಯ:-ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೩ ರ ಸಂಬAಧ ಜಿಲ್ಲಾಧಿಕಾರಿ ಡಾ: ಎಚ್ ಎನ್ ಗೋಪಾಲಕೃಷ್ಣ ಹಾಗೂ ಅಪರ ಜಿಲ್ಲಾಧಿಕಾರಿ ಡಾ: ಎಚ್. ಎಲ್ .ನಾಗರಾಜು ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಪರಿಶೀಲಿಸಿದರು.
ಮತದಾರರ ಪರಿಷ್ಕರಣೆ ಸಂಬAಧ ಸ್ವೀಕೃತವಾಗಿರುವ ನಮೂನೆಗಳನ್ನು ಖುದ್ದು ಪರಿಶೀಲಿಸಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯುವ ಮತದಾರರ ಸೇರ್ಪಡೆ, ಮರಣ ಮತ್ತು ಸ್ಥಳಾಂತರಗೊAಡಿರುವ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಕಟ್ಟುನಿಟ್ಟಾಗಿ ನಿಯಮಾನುಸಾರ ಕ್ರಮವಹಿಸಲು ಸೂಚಿಸಿದರು.
ನಂತರದಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಪ್ರಗತಿಯನ್ನು ಪರಿಶೀಲಿಸಿದ್ದು, ನವೆಂಬರ್ ೨೦ರಂದು ವಿಶೇಷ ಮಿಂಚಿನ ನೋಂದಣಿ ಕಾರ್ಯಕ್ರಮದಂದು ಶೇ.೧೦೦ ರಷ್ಟು ಪ್ರಗತಿಯನ್ನು ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.