ಪಾಲಾರ್ ಪತ್ರಿಕೆ | Palar Patrike
ಮಂಡ್ಯ:- ಕೊತ್ತತ್ತಿ ಗ್ರಾಮ ಪಂಚಾಯಿತಿಯಲ್ಲಿ ನವೆಂಬರ್ ೧೯ ರಂದು ವಿಶ್ವ ಶೌಚಾಲಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಸ್ವಚ್ಛತಾ ಪ್ರತಿಜ್ಞಾ ವಿಧಿ ಭೋದನೆ ಹಾಗೂ ಸ್ವಚ್ಛತಾ ಓಟ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು ಹಾಗೂ ಸ್ವಚ್ಛತಾ ಓಟ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶ್ವ ಶೌಚಾಲಯ ದಿನಾಚರಣೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು(ಡಿ.ಆರ್.ಡಿ.ಎ ಶಾಖೆ), ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಯವರು, ತಾಲ್ಲೂಕು ಯೋಜನಾಧಿಕಾರಿ, ಸ್ವ-ಸಹಾಯ ಸಂಘದ ಸದಸ್ಯರು, ಸ್ವಯಂ ಸೇವಕರು, ಗ್ರಾಮದ ಹಿರಿಯ ಮುಂಖಡರು, ಸ್ವಚ್ಛಾಗ್ರಹಿಗಳು, ಪಂಚಾಯಿತಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಸಮಾಲೋಚಕರು ಉಪಸ್ಥಿತರಿದ್ದರು.